ಬರಲಿದೆ ಹೊಸ ಅರ್ಜಿ – ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಹೊಸ ಅರ್ಜಿ ಕಡ್ಡಾಯ! – ಸಿಎಂ ಡಿಕೆಶಿ 2026

Spread the love

ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳಲ್ಲಿ ನಕಲಿ ಫಲಾನುಭವಿಗಳನ್ನು ತಡೆಯಲು ಸರ್ಕಾರ ಹೊಸ ಅರ್ಜಿ ಸಲ್ಲಿಕೆಯನ್ನು ಕಡ್ಡಾಯಗೊಳಿಸಲು ಮುಂದಾಗಿದೆ. ಏನೆಲ್ಲಾ ಬದಲಾವಣೆಗಳು ಮತ್ತು ಯಾವ ದಾಖಲೆಗಳು ಬೇಕು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ..

WhatsApp Group Join Now
Telegram Group Join Now

ಮತ್ತೆ ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಕಡ್ಡಾಯ: ಏನೆಲ್ಲಾ ದಾಖಲೆ ಬೇಕು? ಮಾಹಿತಿ ಇಲ್ಲಿದೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯವಾಗಿರುವ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಯೋಜನೆಗಳಿಗೆ ಈಗ ದೊಡ್ಡ ಮಟ್ಟದ ಮೇಜರ್ ಸರ್ಜರಿ ಮಾಡಲು ಸರ್ಕಾರ ಮುಂದಾಗಿದೆ. ಈ ಯೋಜನೆಗಳಲ್ಲಿ ನುಸುಳಿರುವ ಲಕ್ಷಾಂತರ ನಕಲಿ ಫಲಾನುಭವಿಗಳನ್ನು ಪತ್ತೆ ಹಚ್ಚಿ, ಯೋಜನೆಗೆ ಲಗಾಮು ಹಾಕಲು ಸರ್ಕಾರ ನಿರ್ಧರಿಸಿದ್ದು, ಹಾಲಿ ಫಲಾನುಭವಿಗಳು ಸೇರಿದಂತೆ ಸೌಲಭ್ಯ ಪಡೆಯಲು ಬಯಸುವವರೆಲ್ಲರೂ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಲು ಚಿಂತನೆ ನಡೆಸಲಾಗಿದೆ.

ಅರ್ಜಿ ಸಲ್ಲಿಸಿದವರಿಗೆ ಮಾತ್ರ ಮುಂದಿನ ದಿನಗಳಲ್ಲಿ ಸೌಲಭ್ಯ ಸಿಗಲಿದ್ದು, ಹೊಸದಾಗಿ ‘ಗ್ಯಾರಂಟಿ ಕಾರ್ಡ್’ ನೀಡಲು ಸಿಎಂ ಡಿ.ಕೆ. ಶಿವಕುಮಾರ್ ಆದೇಶಿಸಿದ್ದಾರೆ..

ಹೊಸ ನಿಯಮ: ಗೃಹಲಕ್ಷ್ಮಿ, ಗೃಹಜ್ಯೋತಿ ಸೌಲಭ್ಯ ಮುಂದುವರಿಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ.

*ದಾಖಲೆಗಳು: ಹೊಸ ಅರ್ಜಿಯಲ್ಲಿ ಬಯೋಮೆಟ್ರಿಕ್, ಆಧಾರ್, ಬ್ಯಾಂಕ್ ವಿವರ, ಬಿಪಿಎಲ್/ಎಪಿಎಲ್ ಮಾಹಿತಿ ಕಡ್ಡಾಯ.

ಅಕ್ರಮ ಪತ್ತೆ: ಐಟಿ ಪಾವತಿದಾರರು, ಮೃತಪಟ್ಟವರಿಗೂ ಹಣ ಜಮೆ ಆಗುತ್ತಿರುವುದು ಪತ್ತೆ.

ಗೃಹಲಕ್ಷ್ಮಿ ಯೋಜನೆಯಲ್ಲಿನ ಅಕ್ರಮಗಳು:

  • ಪ್ರಸ್ತುತ ಈ ಯೋಜನೆಯಲ್ಲಿ 1.28 ಕೋಟಿ ಫಲಾನುಭವಿಗಳಿದ್ದಾರೆ.
  • ಆದರೆ, ಇವರಲ್ಲಿ ಸುಮಾರು 4.30 ಲಕ್ಷ ಫಲಾನುಭವಿಗಳು ಐಟಿ (ಆದಾಯ ತೆರಿಗೆ) ಪಾವತಿದಾರರಾಗಿದ್ದಾರೆ ಎಂದು ತಿಳಿದುಬಂದಿದೆ.
  • ಅತ್ಯಂತ ಆಘಾತಕಾರಿ ವಿಷಯವೆಂದರೆ, ಮೃತಪಟ್ಟ ಮಹಿಳೆಯರ ಖಾತೆಗಳಿಗೂ ಇನ್ನೂ ಹಣ ಸಂದಾಯವಾಗುತ್ತಿದ್ದು, ಸತ್ತವರ ಖಾತೆಗೆ ಸುಮಾರು 100 ಕೋಟಿ ರೂ. ಹಣ ಜಮೆಯಾಗಿದೆ ಎಂದು ಹೇಳಲಾಗುತ್ತಿದೆ.
  • ಕೆಲವರು ಬೇರೆ ಬೇರೆ ಮೊಬೈಲ್ ನಂಬರ್‌ಗಳನ್ನು ಲಿಂಕ್ ಮಾಡಿ ಅಕ್ರಮವಾಗಿ ಹಣ ಪಡೆಯುತ್ತಿದ್ದಾರೆ.

ಹೊಸ ಅರ್ಜಿ ಪ್ರಕ್ರಿಯೆ ಹೇಗಿರಲಿದೆ?

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಗೃಹಲಕ್ಷ್ಮಿ ಯೋಜನೆಗಾಗಿ ಈಗಾಗಲೇ ಹೊಸ ಅರ್ಜಿ ಪ್ರತಿಯನ್ನು ಸಿದ್ಧಪಡಿಸಿದ್ದು, ಅದನ್ನು ಆರ್ಥಿಕ ಇಲಾಖೆ ಮತ್ತು ಮುಖ್ಯಮಂತ್ರಿಗಳ ಅನುಮೋದನೆಗೆ ಸಲ್ಲಿಸಿದೆ. ಹೊಸ ಅರ್ಜಿಯಲ್ಲಿ ಬಯೋಮೆಟ್ರಿಕ್ (ಹೆಬ್ಬೆರಳ ಗುರುತು) ಜೊತೆಗೆ ಪ್ರಮುಖವಾಗಿ 8 ರಿಂದ 10 ಪ್ರಶ್ನೆಗಳನ್ನು ಕೇಳಲಾಗುತ್ತಿದ್ದು, ಇವುಗಳಿಗೆ ಫಲಾನುಭವಿಗಳು ಉತ್ತರಿಸುವುದು ಕಡ್ಡಾಯವಾಗಿದೆ.

ಹೊಸ ಅರ್ಜಿ ಸಲ್ಲಿಕೆ ಕಡ್ಡಾಯಕ್ಕೆ ಕಾರಣಗಳೇನು?

ಸರ್ಕಾರದ ಇತ್ತೀಚಿನ ಪರಿಶೀಲನೆಯಲ್ಲಿ ಈ ಎರಡೂ ಯೋಜನೆಗಳಲ್ಲಿ ಭಾರಿ ಪ್ರಮಾಣದ ದುರುಪಯೋಗ ಮತ್ತು ನಕಲಿ ಫಲಾನುಭವಿಗಳು ಇರುವುದು ಪತ್ತೆಯಾಗಿದೆ.

ಗೃಹಜ್ಯೋತಿ ಯೋಜನೆಯಲ್ಲಿನ ಅಕ್ರಮಗಳು:

  • ಗೃಹಜ್ಯೋತಿ ಯೋಜನೆಯಡಿ ಸದ್ಯ 1.68 ಕೋಟಿಗೂ ಹೆಚ್ಚು ಫಲಾನುಭವಿಗಳಿದ್ದಾರೆ.
  • ಇಲ್ಲಿ ಒಬ್ಬೊಬ್ಬರೇ ಐದಾರು ಮೀಟರ್‌ಗಳ ಹೆಸರಿನಲ್ಲಿ ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿರುವುದು ಬೆಳಕಿಗೆ ಬಂದಿದೆ.
  • “ಅನೇಕರು ಒಂದೇ ಕಟ್ಟಡದಲ್ಲಿ ಮನೆ ಮತ್ತು ಅಂಗಡಿ ಎರಡನ್ನೂ ಹೊಂದಿರುತ್ತಾರೆ.
  • ಅಂಗಡಿ ಅಥವಾ ವ್ಯಾಪಾರಕ್ಕೆ ಗೃಹಜ್ಯೋತಿ ಅನ್ವಯಿಸುವುದಿಲ್ಲ, ಕೇವಲ ವಾಸದ ಮನೆಗೆ ಮಾತ್ರ ಉಚಿತ ವಿದ್ಯುತ್ ನೀಡಲಾಗುತ್ತದೆ.
  • ವ್ಯಾಪಾರಸ್ಥರು ಪ್ರತ್ಯೇಕ ಮೀಟರ್ ಅಳವಡಿಸಿಕೊಳ್ಳಬೇಕು,” ಎಂದು ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
  • ಅಲ್ಲದೆ, ಕರ್ನಾಟಕದವರಲ್ಲದ ಬೇರೆ ರಾಜ್ಯದವರು ಇಲ್ಲಿ ವಾಸವಿದ್ದೂ ಯೋಜನೆ ಪಡೆಯುತ್ತಿದ್ದಾರೆಯೇ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ.

ಅರ್ಜಿಯಲ್ಲಿ ಏನೆಲ್ಲಾ ಪ್ರಶ್ನೆಗಳಿರುತ್ತವೆ? ಯಾವ ದಾಖಲೆ ಬೇಕು?

  1. ಮನೆಯ ಯಜಮಾನಿ ಯಾರು?
  2. ಮನೆಯ ಯಜಮಾನಿಯ ಬ್ಯಾಂಕ್ ಖಾತೆಯ ನಿಖರ ವಿವರಗಳು.
  3. ಈ ಹಿಂದೆ ಮನೆಯಲ್ಲಿ ಎಷ್ಟು ಸದಸ್ಯರ ಖಾತೆಗೆ ಗೃಹಲಕ್ಷ್ಮಿ ಹಣ ಬರುತ್ತಿತ್ತು?
  4. ಫಲಾನುಭವಿಯ ಜಾತಿ ಯಾವುದು?
  5. ಮನೆಯ ಪತಿಯ ಹೆಸರು.
  6. [Aadhaar Redacted] ದಾಖಲಾತಿಯ ನಕಲು ಪ್ರತಿ.
  7. ನೀವು ಆದಾಯ ತೆರಿಗೆ (IT) ಅಥವಾ ಜಿಎಸ್‌ಟಿ (GST) ಪಾವತಿದಾರರೇ?
  8. ನಿಮ್ಮ ಬಳಿ ಬಿಪಿಎಲ್ (BPL) ಕಾರ್ಡ್ ಇದೆಯೋ ಅಥವಾ ಎಪಿಎಲ್ (APL) ಕಾರ್ಡ್ ಇದೆಯೋ?

(ಸೂಚನೆ: ಸುರಕ್ಷತಾ ದೃಷ್ಟಿಯಿಂದ ಗುರುತಿನ ಸಂಖ್ಯೆಗಳ ಬಳಕೆಯ ಬಗ್ಗೆ ಸರ್ಕಾರದ ಮಾರ್ಗಸೂಚಿ ಅನ್ವಯ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ).

ಅರ್ಜಿ ಸಲ್ಲಿಕೆ ಎಲ್ಲಿ ಮತ್ತು ಹೇಗೆ?

ಸರ್ಕಾರವು ಶೀಘ್ರದಲ್ಲೇ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿ, ಅರ್ಜಿ ಸಲ್ಲಿಕೆಗೆ ಅಧಿಕೃತ ಚಾಲನೆ ನೀಡಲಿದೆ.

  • ಅರ್ಜಿ ಸಲ್ಲಿಸುವ ಕೇಂದ್ರಗಳು: ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳು ಹಾಗೂ ಆಫ್‌ಲೈನ್ (ಖುದ್ದಾಗಿ) ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಸಾಧ್ಯತೆ ಇದೆ.
  • ವಿಶೇಷ ಜವಾಬ್ದಾರಿ: ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಸದಸ್ಯರು ಮತ್ತು ಪದಾಧಿಕಾರಿಗಳಿಗೆ ಈ ಹೊಸ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸುವ ಜವಾಬ್ದಾರಿ ನೀಡಲು ಸರ್ಕಾರ ಚಿಂತನೆ ನಡೆಸಿದೆ.

ಅರ್ಹ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಯೋಜನೆ ತಲುಪಬೇಕು ಹಾಗೂ ಸರ್ಕಾರದ ಬೊಕ್ಕಸಕ್ಕೆ ಆಗುತ್ತಿರುವ ನಷ್ಟ ತಪ್ಪಿಸಬೇಕು ಎಂಬ ಉದ್ದೇಶದಿಂದ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಸರ್ಕಾರದಿಂದ ಅಧಿಕೃತ ಮಾರ್ಗಸೂಚಿ ಮತ್ತು ದಿನಾಂಕ ಪ್ರಕಟವಾಗುವುದನ್ನು ಫಲಾನುಭವಿಗಳು ಸದ್ಯಕ್ಕೆ ಕಾಯಬೇಕಾಗಿದೆ..

ಪ್ರಮುಖ ಸೂಚನೆಗಳು: ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು

ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top